ಬ್ರೇಕಿಂಗ್ ನ್ಯೂಸ್
23-11-20 03:03 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಚಳಿ ಶುರುವಾಗಿರುವುದರಿಂದ ಸದ್ಯಕ್ಕೆ ಶಾಲೆ ಆರಂಭಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣಾಧಿಕಾರಿಗಳು ಮತ್ತು ಉನ್ನತ ಮಟ್ಟದ ತಜ್ಞರ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸದ್ಯಕ್ಕೆ ಶಾಲೆ ತೆರೆಯುವುದು ಬೇಡ ಎನ್ನುವ ಸಲಹೆ ಕೇಳಿಬಂದಿದೆ. ಡಿಸೆಂಬರ್ ನಲ್ಲಿ ಚಳಿ ಇರುವುದರಿಂದ ಈ ವೇಳೆಗೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಪೋಷಕರು ಮತ್ತು ಮಕ್ಕಳ ಆತಂಕದ ನಡುವೆ ಶಾಲೆ ಆರಂಭಿಸುವುದು ಬೇಡ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ನಿರ್ಣಯ ಕೈಗೊಂಡಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮತ್ತೆ ಸಭೆ ನಡೆಸಿ, ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ತಾಂತ್ರಿಕ ಸಮಿತಿ ವರದಿ ನೀಡಿದ್ದು, ಒಂದರಿಂದ 8ನೇ ತರಗತಿ ವರೆಗೆ ಈ ವರ್ಷ ಶಾಲೆ ತೆರೆಯುವುದು ಬೇಡ. ಜೊತೆಗೆ, 9ರಿಂದ ಪಿಯುಸಿ ವರೆಗೆ ಶಾಲೆ ತೆರೆಯಬೇಕೆಂಬ ಇಂಗಿತ ಇದೆ. ಆದರೆ, ಸದ್ಯಕ್ಕೆ ಚಳಿ ಇರುವುದರಿಂದ ಇಂಥ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ನಿರ್ಧರಿಸಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹೀಗಾಗಿ ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಂಟನೇ ತರಗತಿ ಮಕ್ಕಳು ಶಾಲೆಗೆ ಹೋಗದೇ ಪಾಸ್ ಆಗುವುದು ಖಚಿತ ಆಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟ ಆಗಿರುವುದರಿಂದ ಕೊನೆಯ ವೇಳೆಗೆ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡಿಸಲು ಮತ್ತು ವಿಳಂಬವಾದರೂ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
ಚಂದನ ವಾಹಿನಿಯಲ್ಲಿ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ದಿನವೂ ಪಾಠ ಮಾಡಲಾಗುತ್ತಿದೆ. ಮಕ್ಕಳು ಅದನ್ನು ನೋಡಿ ಕಲಿಯಬೇಕೆಂದು ಸಚಿವರು ಸಲಹೆ ಮಾಡಿದ್ದಾರೆ.
The Karnataka government Monday decided not to reopen schools and pre-university colleges on December 1. According to Chief Minister B S Yediyurappa, the government “shall review the Covid-19 situation during the third week of December” to decide when to resume offline classes.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm