ಬ್ರೇಕಿಂಗ್ ನ್ಯೂಸ್
07-02-24 03:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 07: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.
ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿ ಬಿಟ್ಟಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರ ತೆಗೆಯಲು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ, ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು ತೀವ್ರ ನಿಗಾಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ.

ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳ ತಜ್ಞ ವೈದ್ಯ ಡಾ.ಪ್ರದೀಪ್ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿದ್ದವು. ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯರಾದ ಡಾ.ವಿನೋದ್ ಸಲಹೆ ನೀಡಿದ್ದಾರೆ. ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಹಾಗೂ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಪ್ರಶಾಂತ್ ಅವರು ಶ್ಲಾಘಿಸಿದ್ದಾರೆ.
Shivamogga Doctors Remove 11cm Fish Stuck In 11 Month Old Boys Throat. An 11-month-old toddler, who accidentally swallowed a fish kept for cooking at home, was saved by a team of paediatricians at a private hospital in Shivamogga
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm