ಬ್ರೇಕಿಂಗ್ ನ್ಯೂಸ್
08-02-24 10:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 08: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಸಮಯದಲ್ಲಿ ಕಾಂಗ್ರೆಸ್ ನಾಯಕರು ದೊಡ್ಡ ಹೋರಾಟವನ್ನೇ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪರ್ಸೆಂಟೇಜ್ ಬಾಂಬ್ ಸಿಡಿಸಿದ್ದಾರೆ.
ಗುರುವಾರ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದಲ್ಲಿ ಮಾತನಾಡಿದ ಅವರು, ''ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದರು. ಬಿಜೆಪಿ ಬಳಿಕ, ಕಾಂಗ್ರೆಸ್ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ ಮುಂದುವರೆದಿದೆ. ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ನೇರವಾಗಿ ಹಣ ಕೇಳುತ್ತಿದ್ದರು. ಈಗ ಅಧಿಕಾರಿಗಳೇ ನೇರವಾಗಿ ಹಣ ಕೇಳುತ್ತಿದ್ದಾರೆ. ಪ್ರತಿ ಟೆಂಡರ್ನಲ್ಲೂ ಹಣ ಕೊಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ಸದ್ಯದಲ್ಲೇ ಅಧಿಕಾರಿಗಳು ಎಂಜಿನಿಯರ್ಗಳ ದಾಖಲೆ ಬಿಡುಗಡೆ ಮಾಡುವುದಾಗಿ'' ತಿಳಿಸಿದರು.
'ರಾಜ್ಯದ ಎಲ್ಲ ಇಲಾಖೆಯಲ್ಲೂ ಅಧಿಕಾರಿಗಳಿಂದಲೇ ಭ್ರಷ್ಟಾಚಾರದ ಬೇರೂರಿದೆ. ಹೆಜ್ಜೆ ಹೆಜ್ಜೆಗೂ ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಗಳಿದ್ದಾರೆ'' ಎಂದು ಕೆಂಪಣ್ಣ ದೂರಿದರು.
''ಪ್ಯಾಕೇಜ್ ಸಿಸ್ಟಂ ಬಂದ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ. ಬೇರೆ ಜಿಲ್ಲೆಗಳಲ್ಲೂ ಕರೆಯಲಾಗಿದೆ. ಇದರಲ್ಲಿ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ಹಣ ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ, ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ ಕೂಡಲೇ ಸರ್ಕಾರ ರದ್ದುಗೊಳಿಸಬೇಕು'' ಎಂದು ಒತ್ತಾಯಿಸಿದರು.
''ವಿವಿಧ ಇಲಾಖೆಗಳ ಟೆಂಡರ್ ನೀಡಿರುವ ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷಗಳೇ ಕಳೆದಿವೆ. ಹೀಗಾದರೂ ಹಣ ಬಿಡುಗಡೆ ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಶೇ.40 ಕಮಿಷನ್ ಆಸೆಯಲ್ಲಿರುವ ಅಧಿಕಾರಿಗಳ ವಿರುದ್ಧ ಸಮಯ ನೋಡಿ ದೂರು ನೀಡುತ್ತೇನೆ'' ಎಂದು ಹೇಳಿದರು.
ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದ ಅಶ್ವತ್ಥನಾರಾಯಣ
ಕೆಂಪಣ್ಣ ಆರೋಪದ ಕುರಿತಂತೆ ಜಸ್ಟಿಸ್ ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವ್ಯವಹಾರದ ಕುರಿತು ನ್ಯಾಯಮೂರ್ತಿ ನಾಗಮೋಹನ್ದಾಸ್ ಸಮಿತಿ ಮೂಲಕ ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು. ನ್ಯಾ. ನಾಗಮೋಹನ್ದಾಸ್ ಅವರು ಕೆಂಪಣ್ಣ ಮಾಡಿದ ಆರೋಪಗಳ ಬಗ್ಗೆ ಸ್ವಯಂಪ್ರೇರಿತ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
Congress government is now involved in 40 percent comission after BJP slams Kempanna, President of Karnataka State Contractors Association
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm