IPS officer Prathap Reddy: ಹಿರಿಯ ಐಪಿಎಸ್‌ ಅಧಿಕಾರಿ, ಡಿಜಿಪಿ ಪ್ರತಾಪ್ ರೆಡ್ಡಿ ದಿಢೀರ್‌ ರಾಜೀನಾಮೆ ; ನಿವೃತ್ತಿಗೆ ಎರಡು ತಿಂಗಳಿರುವಾಗ ಕರ್ತವ್ಯಕ್ಕೆ ಗುಡ್ ಬೈ ಹೇಳಿದರೇಕೆ ಕೂಲ್ ಕ್ಯಾಪ್ಟನ್ ! 

09-02-24 05:45 pm       Bangalore Correspondent   ಕರ್ನಾಟಕ

ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿದ್ದ ಸಿಎಚ್ ಪ್ರತಾಪ ರೆಡ್ಡಿ ನಿವೃತ್ತಿಗೆ ಎರಡು ತಿಂಗಳು ಇರುವಾಗ ದಿಢೀರ್ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಬೆಂಗಳೂರು, ಫೆ.9: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿದ್ದ ಸಿಎಚ್ ಪ್ರತಾಪ ರೆಡ್ಡಿ ನಿವೃತ್ತಿಗೆ ಎರಡು ತಿಂಗಳು ಇರುವಾಗ ದಿಢೀರ್ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು ಏಪ್ರಿಲ್ 30ಕ್ಕೆ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಕರ್ನಾಟಕ ಕೇಡರಿನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. 

ಆರಂಭದಲ್ಲಿ ಪ್ರತಾಪ್ ರೆಡ್ಡಿ ಅವರು ಸಿಬಿಐನಲ್ಲಿಯೂ ಕೆಲಸ ಮಾಡಿದ್ದರು. ಬ್ಯಾಂಕಿಂಗ್ ವಂಚನೆಗಳು, ಸೈಬರ್ ಕ್ರೈಂಗಳಲ್ಲಿ ಅಪಾರ ಜ್ಞಾನ ಹೊಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಆನಂತರ, ದಿಢೀರ್ ಬದಲಾಯಿಸಿ ದಯಾನಂದ್ ಅವರನ್ನ ಆ ಸ್ಥಾನಕ್ಕೆ ತರಲಾಗಿತ್ತು. ರಾಜ್ಯದ ಕೂಲ್‌ ಐಪಿಎಸ್‌ ಅಧಿಕಾರಿಗಳಲ್ಲಿ ಪ್ರತಾಪ್ ರೆಡ್ಡಿ ಅವರು ಸಹ ಒಬ್ಬರು.

Two months ahead of his retirement, senior IPS officer Prathap Reddy has tendered his resignation citing personal reasons. The move is being seen  as a significant development in the state police department.Question are now being raised about whether Prathap Reddy really resigned for personal reasons or whether the recent changes in the police department led to his decision. As DGP, he was reportedly upset over some developments. According to sources close to the officer, he was being hurt intentionally which is why he resigned.