ಬ್ರೇಕಿಂಗ್ ನ್ಯೂಸ್
10-02-24 11:48 am HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.10: ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಇಬ್ಬರು ಮುಖಂಡರು ನಡುಬೀದಿಯಲ್ಲಿ ಹೊಡೆದಾಟ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಮೂಡಿಗೆರೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೂಡಿಗೆರೆ ತಾಲೂಕು ಸಮಿತಿಯ ಅಧ್ಯಕ್ಷ ಸ್ಥಾನ ತಪ್ಪಲು ಹಾಲಿ ತಾಪಂ ಸದಸ್ಯ ಕೆ.ಸಿ ರತನ್ ಕಾರಣ ಎಂದು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ ಹಲ್ಲೆ ನಡೆಸಿದ್ದಾರೆ. ತಾಲೂಕು ಅಧ್ಯಕ್ಷರಾಗಿ ಟಿಎಂ ಗಜೇಂದ್ರ ಅವರನ್ನು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ನೇಮಕ ಮಾಡಿದ್ದರು. ಇದರಿಂದ ಕೋಪಗೊಂಡ ಪುಟ್ಟಣ್ಣ ಮತ್ತು ಬೆಂಬಲಿಗರು ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಇದೇ ವೇಳೆ, ಪುಟ್ಟಣ್ಣ ಮತ್ತು ಕೆಸಿ ರತನ್ ನಡುವೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲೇ ಹೊಡೆದಾಟ ನಡೆಸಿದ್ದಾರೆ. ಬಟ್ಟೆ ಹರಿದುಕೊಂಡು ಇಬ್ಬರೂ ಪರಸ್ಪರ ಕಿತ್ತಾಡಿದ್ದು ಇತರರು ಬಿಡಿಸಲು ಬಂದರೂ ಕೇಳದೆ ಹೊಡೆದಾಟ ನಡೆಸಿದ್ದಾರೆ. ಇದನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು ನೆಲಕ್ಕುರುಳಿಸಿ ಹೊಡೆದಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.
ಮೂಡಿಗೆರೆಯ ತಾಲೂಕು ಬಿಜೆಪಿ ಕಚೇರಿ ಬಳಿಯಲ್ಲೇ ಘಟನೆ ನಡೆದಿದೆ. ಕೆ.ಸಿ ರತನ್ ಹಸ್ತಕ್ಷೇಪದಿಂದ ತನ್ನ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಸಿಟ್ಟಿನಲ್ಲಿ ಹೊಡೆದಾಡಿದ್ದಾರೆ. ಹೊಸತಾಗಿ ಅಧ್ಯಕ್ಷರಾದ ಗಜೇಂದ್ರ ಬಗ್ಗೆ ಪುಟ್ಟಣ್ಣ ಮತ್ತು ಕನ್ನಳ್ಳಿ ಭರತ್ ಟೀಮ್ ವಿರೋಧ ವ್ಯಕ್ತಪಡಿಸಿದ್ದು ಕಚೇರಿ ಎದುರಲ್ಲಿ ಪ್ರತಿಭಟನೆ ನಡೆಸಿದ್ದರು. ಹಲ್ಲೆಗೊಳಗಾದ ರತನ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Party leaders #fight in the middle of the street during the election of the #Mudigere #BJP taluk president selection #BREAKING_NEWS @INCKarnataka pic.twitter.com/44zNNHy7Sm
— Headline Karnataka (@hknewsonline) February 10, 2024
Bjp workers fight in the middle of the road over selection of taluk President post in Mudigere, video viral.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm