ಬ್ರೇಕಿಂಗ್ ನ್ಯೂಸ್
10-02-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಸಂಸದ ಡಿಕೆ ಸುರೇಶ್ ಕೆಎಸ್ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ದೇಶದ್ರೋಹಿಗಳಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಗಮನ ಸೆಳೆಯಲು ಮಾತನಾಡ್ತಿದ್ದಾರೆ ಎಂದು ಟೀಕಿಸಿದರು.
ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ. ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ ಎಂದು ಟಾಂಗ್ ನೀಡಿದರು.
ಫೆ. 08 ರಂದು ದಾವಣಗೆರೆಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ ಅವರು, ''ಸಂಸದ ಡಿಕೆ ಸುರೇಶ್, ಶಾಸಕ ವಿನಯ್ ಕುಲಕರ್ಣಿ ಇಬ್ಬರು ದೇಶದ್ರೋಹಿಗಳು. ಇಬ್ಬರನ್ನು ಪಕ್ಷದಿಂದ ಕಿತ್ತು ಬಿಸಾಕಬೇಕು. ಈ ವೇದಿಕೆಯಿಂದಲೇ ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವೆ. ಈ ರೀತಿಯ ದೇಶ ವಿಭಜನೆ ಎಂಬುದು ಜವಾಹರಲಾಲ್ ನೆಹರು ಕಾಲದಿಂದ ಬಂದಿದೆ'' ಎಂದು ಖಾರವಾಗಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ಬಳಿಕ ಅವರ ವಿರುದ್ಧ ಇದೀಗ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದೂರು ಕೂಡ ದಾಖಲಾಗಿದೆ.
ಒಂದೆಡೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ ಒಂದೇ ಎಂದು ಎಐಸಿಸಿ ಅಧ್ಯಕ್ಷರು ಹೇಳಿದರೆ, ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಇಬ್ಬರು ದೇಶದ್ರೋಹಿಗಳು ದಕ್ಷಿಣ ಭಾರತ ಪ್ರತ್ಯೇಕ ರಾಷ್ಟವಾಗಬೇಕು ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್ನ ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಕಿಡಿಕಾರಿದ್ದರು. ಇನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
Dk Suresh says i will visit K. S. Eshwarappa house let him shoot me open challenge, we all know which party killed Gandhi he taunted.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am