ಬ್ರೇಕಿಂಗ್ ನ್ಯೂಸ್
10-02-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಸಂಸದ ಡಿಕೆ ಸುರೇಶ್ ಕೆಎಸ್ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ದೇಶದ್ರೋಹಿಗಳಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಗಮನ ಸೆಳೆಯಲು ಮಾತನಾಡ್ತಿದ್ದಾರೆ ಎಂದು ಟೀಕಿಸಿದರು.
ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ. ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ ಎಂದು ಟಾಂಗ್ ನೀಡಿದರು.
ಫೆ. 08 ರಂದು ದಾವಣಗೆರೆಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ ಅವರು, ''ಸಂಸದ ಡಿಕೆ ಸುರೇಶ್, ಶಾಸಕ ವಿನಯ್ ಕುಲಕರ್ಣಿ ಇಬ್ಬರು ದೇಶದ್ರೋಹಿಗಳು. ಇಬ್ಬರನ್ನು ಪಕ್ಷದಿಂದ ಕಿತ್ತು ಬಿಸಾಕಬೇಕು. ಈ ವೇದಿಕೆಯಿಂದಲೇ ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವೆ. ಈ ರೀತಿಯ ದೇಶ ವಿಭಜನೆ ಎಂಬುದು ಜವಾಹರಲಾಲ್ ನೆಹರು ಕಾಲದಿಂದ ಬಂದಿದೆ'' ಎಂದು ಖಾರವಾಗಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ಬಳಿಕ ಅವರ ವಿರುದ್ಧ ಇದೀಗ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದೂರು ಕೂಡ ದಾಖಲಾಗಿದೆ.
ಒಂದೆಡೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ ಒಂದೇ ಎಂದು ಎಐಸಿಸಿ ಅಧ್ಯಕ್ಷರು ಹೇಳಿದರೆ, ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಇಬ್ಬರು ದೇಶದ್ರೋಹಿಗಳು ದಕ್ಷಿಣ ಭಾರತ ಪ್ರತ್ಯೇಕ ರಾಷ್ಟವಾಗಬೇಕು ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್ನ ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಕಿಡಿಕಾರಿದ್ದರು. ಇನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
Dk Suresh says i will visit K. S. Eshwarappa house let him shoot me open challenge, we all know which party killed Gandhi he taunted.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am