ಬ್ರೇಕಿಂಗ್ ನ್ಯೂಸ್
10-02-24 08:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಬಿಗ್ ಬಾಸ್ ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
Varthur Police Station Inspector suspended after his photo went viral with big boss varthur santosh
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm