Bagalkot Narayan Banda,Somanna BJP; ಬಿಜೆಪಿಯಿಂದ ರಾಜ್ಯಸಭೆಗೆ ಬಾಗಲಕೋಟೆಯ ನಾರಾಯಣ ಬಾಂಡಗೆ ; ಟಿಕೆಟ್ ಆಕಾಂಕ್ಷಿ ಸೋಮಣ್ಣಗೆ ನಿರಾಸೆ 

11-02-24 09:13 pm       HK NEWS   ಕರ್ನಾಟಕ

ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ. 

ಬೆಂಗಳೂರು, ಫೆ.11: ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ. 

ಈ ಹಿಂದೆ ವರಿಷ್ಠರನ್ನು ಭೇಟಿಯಾದಾಗ ಸೋಮಣ್ಣ ತಮ್ಮನ್ನು ರಾಜ್ಯಸಭೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ರಾಜ್ಯದ ವಿಧಾನಸಭೆ ಸದಸ್ಯರು ಆಯ್ಕೆ ಮಾಡುವ ನಾಲ್ಕು ಸ್ಥಾನಗಳು ಖಾಲಿಯಾಗುತ್ತಿದ್ದು, ಕಾಂಗ್ರೆಸ್ ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಹೊಂದಿರುವ ಕಾರಣ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ. 

ಹಾಲಿ ರಾಜ್ಯಸಭೆ ಸದಸ್ಯರಾದ ಬಿಜೆಪಿಯ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್ ಮತ್ತು ಕಾಂಗ್ರೆಸಿನಿಂದ ಆಯ್ಕೆಯಾಗಿದ್ದ ಎಲ್. ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಇದೇ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.

ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್​​ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

Bagalkot Narayan Banda nominees for RS polls bjp Somanna disappointed. Somanna, who recently met BJP national president Nadda, told reporters that he had told the party leaders that he would tour extensively throughout the state and campaign for the party candidates if he is made a Rajya Sabha member.