ಬ್ರೇಕಿಂಗ್ ನ್ಯೂಸ್
12-02-24 10:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 12: ಗೃಹಿಣಿಯ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.
22 ವರ್ಷದ ಕಾವ್ಯ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಸಮೀಪದ ಮನೆಯಲ್ಲಿ ಘಟನೆ ನಡೆದಿದ್ದು, ಕುಣಿಗಲ್ ನಿವಾಸಿಯಾಗಿದ್ದ ಮೃತ ಕಾವ್ಯ ಅವರನ್ನು ಎರಡು ವರ್ಷಗಳ ಹಿಂದಷ್ಟೇ ಪ್ರವೀಣ್ ಎಂಬಾತನಿಗೆ ಕುಟುಂಬಸ್ಥರು ಮದುವೆ ಮಾಡಿಕೊಟ್ಟಿದ್ದರು. ದಂಪತಿಗೆ ಒಂದು ವರ್ಷದ ಮಗು ಕೂಡ ಇದೆ.
ಘಟನಾ ಸ್ಥಳಕ್ಕೆ ರಾಜಗೋಪಾಲ ನಗರ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಗಳ ಸಾವಿನ ಸುದ್ದಿ ಪೋಷಕರು ಮೃತದೇಹದ ಮುಂದೆ ಗೋಳಾಡಿದ್ದು, ನೋಡುಗರ ಕಣ್ಣಲ್ಲಿ ನೀರು ತರಿಸಿತ್ತು. ತಮ್ಮ ಮಗಳ ಸಾವಿಗೆ ಅಳಿಯ ಪ್ರವೀಣನೇ ಕಾರಣ, ಆತನನ್ನು ನಮಗೆ ಒಪ್ಪಿಸಿ ಎಂದು ಪೊಲೀಸರೊಂದಿಗೆ ಮೃತಳ ಪೋಷಕರು ವಾಗ್ವಾದ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಮೊಮ್ಮಗನ ಹುಟ್ಟುಹಬ್ಬ ಆಚರಣೆ ;
ಘಟನೆ ಸಂಬಂಧ ಮೃತ ಕಾವ್ಯಳ ಪೋಷಕರಿಂದ ಪತ್ನಿ ಪ್ರವೀಣ್ ಸೇರಿ ನಾಲ್ವರ ವಿರುದ್ಧ ದೂರು ನೀಡಲಾಗಿದೆ. ಅಳಿಯನ ಅಕ್ರಮ ಸಂಬಂಧಕ್ಕೆ ಮಗಳು ಸಾವನ್ನಪ್ಪಿದ್ದಾಳೆ ಎಂದು ಮೃತ ಕಾವ್ಯ ಪೋಷಕರ ಆರೋಪ ಮಾಡಿದ್ದಾರೆ. ಮಗಳಿಗೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಅದ್ದೂರಿಯಾಗಿ ಮದುವೆ ಮಾಡಿ ಕೊಟ್ಟಿದ್ದೇವು. ಆ ವೇಳೆ ಅರ್ಧ ಕೆಜಿ ಚಿನ್ನಕೊಟ್ಟು, 50 ಲಕ್ಷ ಖರ್ಚು ಮಾಡಿ ಅದ್ದೂರಿಯಾಗಿ ಮಾಡಿಕೊಟ್ಟಿದ್ದೇವು. ಅಲ್ಲದೇ ಇತ್ತಿಚೇಗಷ್ಟೇ ಮೊಮ್ಮಗನ ಹುಟ್ಟುಹಬ್ಬವನ್ನು ನಾವೇ ಆಚರಣೆ ಮಾಡಿದ್ದೇವು.
ಅಳಿಯನ ಅಕ್ರಮ ಸಂಬಂಧ ಆರೋಪ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಆದರೆ ಎಲ್ಲಿಯೂ ಕೆಲಸಕ್ಕೆ ಹೋಗ್ತಿರಲಿಲ್ಲ. ಅಳಿಯನಿಗೆ ಬೇರೆ ಹುಡುಗಿಯೊಬ್ಬಳ ಜೊತೆ ಅಕ್ರಮ ಸಂಬಂಧ ಇತ್ತು. ಅವನಿಗೆ ಹೆಂಡತಿ, ಮಗನಿಗಿಂತ ಅವಳೇ ಹೆಚ್ಚಾಗಿದ್ದಳು. ಈ ಬಗ್ಗೆ ಪ್ರಶ್ನೆ ಮಾಡಿದರೆ, ಆಕೆ ನನ್ನ ತಂಗಿ ಅಂತ ಹೇಳುತ್ತಿದ್ದ. ಮಗಳು ಸಾವನ್ನಪ್ಪಿದ್ದಾಳೆ ಅಂತ ಕುಟುಂಬಸ್ಥರೇ ಮೃತದೇಹವನ್ನ ಕೆಳಗಿಳಿಸಿದ್ದಾರೆ. ಆದರೆ ದೇಹದ ಮೇಲೆ ಕೆಲವೊಂದು ಗಾಯಾಳುಗಳಾಗಿವೆ. ಇದನ್ನ ಮುಚ್ಚಿಡ್ತಿದ್ದಾರೆ. ನಮಗೆ ಸಂಜೆ 5 ವರೆಗೆ ಕಾಲ್ ಮಾಡಿ ಮಗಳ ಸಾವಿನ ವಿಚಾರ ತಿಳಿಸಿದ್ದರು ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಿರುವ ಪೊಲೀಸರು, ಮೃತ ಕಾವ್ಯಳ ಪತಿ ಪ್ರವೀಣ್, ಅತ್ತೆ, ಮಾವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
Bangalore married woman commits suicide, husband suspectedl of illicit affair. The diseased has been identified as Kavya. Parents of kavya allege that their son in law and affair with another lady.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am