ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm