ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm