ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm