ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm