ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm