ಬ್ರೇಕಿಂಗ್ ನ್ಯೂಸ್
24-11-20 01:16 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 24 : ಕೆಎಎಸ್ ಅಧಿಕಾರಿ ಡಾ. ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ ! ಬದಲಿಗೆ ಬೆಂಗಳೂರಿನಲ್ಲಿರುವ ಸರ್ಕಾರಿ ಜಮೀನಿಗೆ ಖಾಸಗಿ ವ್ಯಕ್ತಿಗಳನ್ನು ಹುಟ್ಟುಹಾಕಿ ಸರ್ಕಾರದ ಕೋಟ್ಯಂತರ ರೂಪಾಯಿ ಪರಿಹಾರ ಕೊಟ್ಟು ಲೂಟಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಕೇವಲ ಸುಧಾ ಮಾತ್ರವಲ್ಲ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರು ಭಾಗಿಯಾಗಿದ್ದಾರೆ.
ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿದರೆ, ಈ ಭೂಮಿಗೆ ಬಿಡಿಎ ಸ್ವಾಧೀನ ಹೆಸರಿನಲ್ಲಿ ಕೋಟಿ ಕೋಟಿ ಪರಿಹಾರ ನೀಡುವ ನೆಪದಲ್ಲಿ ಕೆಎಎಸ್ ಅಧಿಕಾರಿ ನೂರಾರು ಕೋಟಿ ಲೂಟಿ ಮಾಡಿರುವುದು ಎಸಿಬಿ ತನಿಖೆಯಲ್ಲಿ ಬಯಲಾಗಿದೆ.

ಡಾ. ಸುಧಾ ಅವರ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೊದಲ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳಿಗೆ 200 ದಾಖಲೆಗಳು ಮತ್ತು 50 ಕೋಟಿ ರೂ. ಗೂ ಅಧಿಕ ಆಸ್ತಿ ಬಯಲಿಗೆ ಎಳೆದಿದ್ದರು. ಇದಾದ ಬಳಿಕ ಸುಧಾ ಬೇನಾಮಿ ಏಜೆಂಟ್, ರಿಯಲ್ ಎಸ್ಟೇಟ್ ಉದ್ಯಮಿ ರೇಣುಕಾ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಸುಧಾ ಅವರ ಚಿನ್ನದ ಸಂಪತ್ತು ಜನರನ್ನು ಬೆಚ್ಚಿ ಬೀಳಿಸಿತ್ತು.
ಸುಧಾ ಅವರ ಅಕ್ರಮ ಆಸ್ತಿಯ ಜಾಡು ಹಿಡಿದು ತನಿಖೆ ನಡೆಸಿದಾಗ ಸರ್ಕಾರಿ ಭೂಮಿಗೆ ಬಬಿಡಿಎ ಪರಿಹಾರ ಕೊಟ್ಟು ನೂರಾರು ಕೋಟಿ ಲೂಟಿ ಮಾಡಿರುವ ದೊಡ್ಡ ಹಗರಣ ಬೆಳಕಿಗೆ ಬಂದಿದೆ.


ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ. ಸರ್ಕಾರಿ ಭೂಮಿಗೆ ಕಂದಾಯ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದೇ ಭೂಮಿಯನ್ನು ಬಿಡಿಎ ಸ್ವಾಧೀನ ಪಡಿಸಿಕೊಂಡು ಕೋಟಿ ಕೋಟಿ ಪರಿಹಾರ ನೀಡಿದೆ. ಇದರಲ್ಲಿ ಸಾಕಷ್ಟು ರಿಯಲ್ ಎಸ್ಟೇಟ್ ಏಜೆಂಟರು ಶಾಮೀಲಾಗಿದ್ದರು. ಕೂಲಿ ಮಾಡುತ್ತಿದ್ದವರು ಬೆಂಜ್ ಕಾರಲ್ಲಿ ಓಡಾಡುತ್ತಿದ್ದಾರೆ. ಸಾಕಷ್ಟು ಏಜೆಂಟರನ್ನು ಈ ಅಕ್ರಮದಲ್ಲಿ ಲಾಭ ಪಡೆದುಕೊಂಡಿದ್ದಾರೆ. ಸರ್ಕಾರಿ ಭೂಮಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಖಾತೆ, ಪಹಣಿ ಮಾಡಿಸಿ ಆ ಜಮೀನನ್ನುಬಿಡಿಎ ಸ್ವಾಧೀನ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಗೆ ಪರಿಹಾರ ನೀಡಿದೆ. ಇದರ ಸಿಂಹಪಾಲು ಹಣವನ್ನು ಸುಧಾಗೆ ಹೋಗಿದ್ದು, ರೇಣುಕಾ ಅವರ ಮನೆಗೆ ಸೇರಿಸುತ್ತಿದ್ದರು. ಇದರಲ್ಲಿ ಕೇವಲ ಸುಧಾ ಮಾತ್ರವಲ್ಲ, ಬಿಡಿಎ ಮೇಲಾಧಿಕಾರಿಗಳು ಕೂಡ ಶಾಮೀಲಾಗಿರುವುದು ಕಂಡು ಬಂದಿದೆ. ಮುಂದಿನ ದಿನದಗಳಲ್ಲಿ ಕಂದಾಯ ಮತ್ತು ಬಿಡಿಎ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸಿಬಿ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
The Anti-Corruption Bureau on Tuesday morning conducted fresh search operations at six locations in connection with a disproportionate asset case against a Karnataka Administrative Service officer in the state.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm