ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm