ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm