ಬ್ರೇಕಿಂಗ್ ನ್ಯೂಸ್
14-02-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ಆಗಿದೆಯೆಂಬ ವಿಚಾರ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಮತ್ತು ವಿಪಕ್ಷ ಸದಸ್ಯರ ವಾಗ್ಯುದ್ದಕ್ಕೆ ಸಾಕ್ಷಿಯಾಯಿತು.
ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಪರಶುರಾಮನ ಪ್ರತಿಮೆಯ ಅರ್ಧ ಭಾಗ ಕಂಚು, ಇನ್ನರ್ಧ ನಕಲಿಯಾಗಿದ್ದು ಫೈಬರ್ ನಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪಗಳಿವೆ. ದೋಷಪೂರಿತವಾಗಿ ವಿಗ್ರಹ ನಿರ್ಮಿಸಿದ್ದು ಯಾರು, ಇದಕ್ಕೆ ಯಾರು ಕಾರಣ ಎಂಬ ಬಗ್ಗೆ ಸಮಗ್ರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕುತ್ತರಿಸಿದ ಸಚಿವ ಶಿವರಾಜ ತಂಗಡಗಿ, ಹಿಂದಿನ ಬಿಜೆಪಿ ಸರಕಾರದಲ್ಲಿ ಆಗಿರುವ ಎಡವಟ್ಟುಗಳನ್ನು ನಮ್ಮ ಸರಕಾರ ಬಯಲು ಮಾಡಿದೆ. ಅವ್ಯವಹಾರದ ಬಗ್ಗೆ ಕಾರ್ಕಳದವರೇ ಆರೋಪ ಮಾಡಿದ್ದು, ತನಿಖೆಗೆ ದೂರು ನೀಡಿದ್ದಾರೆ. ಪರಶುರಾಮನ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡವರಿಂದಲೇ ಅಕ್ರಮ ಆಗಿದೆ, ದೇವರ ಹೆಸರೇಳಿ ರಾಜಕೀಯ ಮಾಡೋರಿಂದಲೇ ಅಕ್ರಮ ಆಗಿದೆ ಎಂದು ಬಿಜೆಪಿ ನಾಯಕರ ಹೆಸರೆತ್ತದೆ ಟಾಂಗ್ ಇಟ್ಟಿದ್ದಾರೆ.
ಈ ವೇಳೆ ಬಿಜೆಪಿ ಸದಸ್ಯರು ಸಿಟ್ಟುಗೊಂಡು ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿ, ಅದು ಬಿಟ್ಟು ದೇವರ ಹೆಸರೇಳಿ ಅವ್ಯವಹಾರ ಎಂದು ಹೇಳಿ ಗೂಬೆ ಕೂರಿಸುವುದು ಬೇಡ ಎಂದು ಜೋರು ದನಿಯಲ್ಲಿ ಹೇಳಿದರು. ಅದಕ್ಕೆ ಶಿವರಾಜ ತಂಗಡಗಿ, ಇದು ನಮ್ಮ ಸರಕಾರದಲ್ಲಿ ನಡೆದಿರುವುದಲ್ಲ. ಹಿಂದಿನ ಸರಕಾರ ಇರುವಾಗ ಆಗಿರುವ ಕಾಮಗಾರಿ. ಅವ್ಯವಹಾರದ ಆರೋಪ ಬಂದಿದ್ದಕ್ಕೆ ಹೇಳಿದ್ದೇನೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿಯೂ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ ಎಂದರು.
ಈ ವಿಚಾರದಲ್ಲಿ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪ ಹೆಚ್ಚುತ್ತಿದ್ದಂತೆ ಶಿವರಾಜ ತಂಗಡಗಿ, ಪರಶುರಾಮ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಾದ ಅಕ್ರಮದ ಬಗ್ಗೆ ಸಿಐಡಿ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸಿಐಡಿ ತನಿಖೆಯ ವರದಿ ಆಧರಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
Prashurama theme park Karkala controversy picked up in assembly, cheating in the name of god Shivaraj Tangadagi slams sunil kumar.
20-05-25 03:30 pm
Bangalore Correspondent
Shashi Kumar IPS, Corruption, Hubballi, polic...
19-05-25 04:00 pm
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 02:03 pm
Mangalore Correspondent
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm