ಬ್ರೇಕಿಂಗ್ ನ್ಯೂಸ್
14-02-24 06:54 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕರ್ನಾಟಕ ರಾಜ್ಯ ತೀವ್ರ ಬರಗಾಲದಲ್ಲಿದ್ದು ರೈತರಿಗೆ ಪರಿಹಾರ ಕೊಡಲು ಹಣ ಇಲ್ಲದಿದ್ದಾಗ ಸ್ಪೀಕರ್ ಯು.ಟಿ. ಖಾದರ್ ಓಡಾಟಕ್ಕೆ ಹೊಸ ದುಬಾರಿ ಫಾರ್ಚುನರ್ ಕಾರು ಬೇಕಿತ್ತಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ‘ದುಂದುವೆಚ್ಚಗಳನ್ನು ಕಡಿಮೆ ಮಾಡಿ, ಇರುವ ವಾಹನವನ್ನೇ ಮಾರ್ಪಾಡು ಮಾಡಿಕೊಂಡು ಬಳಸಿ ಬೊಕ್ಕಸಕ್ಕೆ ಹೊರೆಯಾಗದೆ ಇರುವ ಹಾಗೆ ಮಾಡಿ ಮೇಲ್ಪಂಕ್ತಿ ಹಾಕಿ ಕೊಡಬೇಕಾಗಿದ್ದ ಸಭಾಧ್ಯಕ್ಷರು ಐಷಾರಾಮಿ ಕಾರನ್ನು ಖರೀದಿ ಮಾಡುವ ಅವಶ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, ರಾಜ್ಯ ಭೀಕರ ಬರದಿಂದ ಕಂಗೆಟ್ಟಿರುವ ಸಂದರ್ಭದಲ್ಲಿ 223 ತಾಲೂಕುಗಳು ಬರ ಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿರುವಾಗ ಈ ರೀತಿಯಾದ ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಹಾಕಬೇಕಿತ್ತು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಯು.ಟಿ. ಖಾದರ್ ಅವರಿಗೆ ವಿಧಾನಸಭೆ ಸಚಿವಾಲಯದಿಂದ ಹೊಸ ಕಾರು (ಕೆಎ 11 ಜಿಎ 1) ಒದಗಿಸಲಾಗಿದ್ದು, ವಿಶೇಷ ವಿನ್ಯಾಸ ಮಾಡಿರುವುದರಿಂದ 41 ಲಕ್ಷ ವೆಚ್ಚ ಆಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
360 ಡಿಗ್ರಿ ಕ್ಯಾಮೆರಾ, ಪ್ರಯಾಣದ ಸಂದರ್ಭದಲ್ಲಿ ಮುಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ಇಡಿ ಲೈಟ್ ಸೌಲಭ್ಯವನ್ನು ಈ ಕಾರು ಹೊಂದಿದ್ದು, ಜಿಆರ್ ಕಿಟ್ ಅಳವಡಿಸುವ ಮೂಲಕ ಕಾರಿಗೆ ವಿಶೇಷ ವಿನ್ಯಾಸ ಕೂಡ ಮಾಡಲಾಗಿದೆ. ಕಾರು ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದ್ದು, ರಾಜ್ಯಪಾಲರ ಹೊರತಾಗಿ ವಿಧಾನ ಸಭಾಧ್ಯಕ್ಷರಿಗೆ ಮಾತ್ರ ಈ ಲಾಂಛನ ಅಳವಡಿಸಲು ಅವಕಾಶವಿದೆ.
Karnataka Assembly Speaker U.T. Khader on Friday said that the state is reeling under severe drought and there is no money to pay compensation to farmers. BJP MLA Basanagouda Patil Yatnal questioned whether Khader needed a new expensive Fortuner car to drive.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm