ಬ್ರೇಕಿಂಗ್ ನ್ಯೂಸ್
15-02-24 09:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರ ವಿರುದ್ಧ ಕ್ರಮ ಜರುಗಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ. ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ. ಬಳೆ ತೊಡುವುದರಲ್ಲಿ ಪಾವಿತ್ರ್ಯತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು.
ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ. ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕರ್ನಾಟಕ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Action should be taken against Sister Prabha of Jerosa School in Mangaluru for allegedly making derogatory remarks against Hindu culture.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm