ಬ್ರೇಕಿಂಗ್ ನ್ಯೂಸ್
15-02-24 09:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರ ವಿರುದ್ಧ ಕ್ರಮ ಜರುಗಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ. ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ. ಬಳೆ ತೊಡುವುದರಲ್ಲಿ ಪಾವಿತ್ರ್ಯತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು.
ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ. ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕರ್ನಾಟಕ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Action should be taken against Sister Prabha of Jerosa School in Mangaluru for allegedly making derogatory remarks against Hindu culture.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm