ಬ್ರೇಕಿಂಗ್ ನ್ಯೂಸ್
15-02-24 09:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರ ವಿರುದ್ಧ ಕ್ರಮ ಜರುಗಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ. ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ. ಬಳೆ ತೊಡುವುದರಲ್ಲಿ ಪಾವಿತ್ರ್ಯತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು.
ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ. ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕರ್ನಾಟಕ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Action should be taken against Sister Prabha of Jerosa School in Mangaluru for allegedly making derogatory remarks against Hindu culture.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm