ಬ್ರೇಕಿಂಗ್ ನ್ಯೂಸ್
16-02-24 03:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯ ರಾಜ್ಯ ಸರ್ಕಾರದ ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಘೋಷಣೆ ಕೂಗಿದ ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ನಡೆಸಿದ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು.
ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಬಜೆಟ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಸದಸ್ಯರು ವಿಧಾನಸಭೆ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿದರು. ಬಜೆಟ್ ಅಭಿವೃದ್ಧಿ ವಿರೋಧಿಯಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ, ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, "ಸಿದ್ದರಾಮಯ್ಯ ಅವರು ಇವತ್ತು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಅಲ್ಲಿ ರಾಜಕೀಯ ಸ್ಕೋಪ್ ಇರೋದಿಲ್ಲ, ಜನರ ದೃಷ್ಟಿಯಿಂದ ಬಜೆಟ್ ಮಾಡುತ್ತಾರೆ ಅಂದುಕೊಂಡಿದ್ದೆವು. ಪದೇ ಪದೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಾರೆ. ಕೇಂದ್ರ ಸರ್ಕಾರವನ್ನು ತೆಗಳುತ್ತಾರೆ. 15ನೇ ಹಣಕಾಸು ಆಯೋಗದಲ್ಲಿ ಸಿಎಂ ಆಗಿದ್ದವರು ಯಾರು? ನೀವೇ ಹೋಗಿ ಒಪ್ಪಿಗೆ ಕೊಟ್ಟಿದ್ದೇಕೆ? ಕುಣಿಯಲು ಬಾರದವ ನೆಲ ಡೊಂಕು ಎಂದಂತೆ ಕೇಂದ್ರವನ್ನು ಟೀಕೆ ಮಾಡುತ್ತಿದ್ದೀರಿ. ಆಡಳಿತ ನಡೆಸಲು ಆಗಿಲ್ಲ ಎಂದರೆ ಅಧಿಕಾರ ಬಿಟ್ಟು ಕೆಳಗಿಳಿಯಿರಿ" ಎಂದು ಸಿಟ್ಟು ಹೊರ ಹಾಕಿದರು.
"ಕೇಂದ್ರ ಸರ್ಕಾರದ ಮೇಲೆ ಸವಾಲು ಹಾಕ್ತೀರಾ? ಇದನ್ನು ಖಂಡಿಸಿ ವಾಕ್ ಔಟ್ ಮಾಡಿದ್ದೇವೆ. ಹಿಂದೆ ಕಾಂಗ್ರೆಸ್ನವರು ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು. ಈಗ ಹೇಳಿ ಏನು ಮಾಡೋದು ಅಂತಾ? ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ಸರ್ಕಾರದ ತಪ್ಪುಗಳನ್ನು ಹೇಳೋದಕ್ಕೆ ಜನ ನಮ್ಮನ್ನು ಕುರಿಸಿರೋದು" ಎಂದರು.
ಸಿಎಂ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ಕೊಡಬೇಕು. 7 ಕೋಟಿ ಜನರ ಮೇಲೆ ಸಾಲದ ಹೊರೆ ಹಾಕಿದ್ದಾರೆ. 1 ಲಕ್ಷ ಕೋಟಿ ಸಾಲ ದಾಟಿಸಿದ ಮೊದಲ ಸಿಎಂ ಸಿದ್ದರಾಮಯ್ಯ. ಕೃಷಿ ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ. ಬೆಂಗಳೂರಿಗೆ ಸುರಂಗ ಮಾರ್ಗ ಕೊಟ್ಟಿದ್ದಾರೆ. ಕೆಂಪಣ್ಣ ಆರೋಪಿಸಿದ್ದ 50 ಪರ್ಸೆಂಟ್ ಹಣ ಇಡೋಕೆ ಈ ಸುರಂಗ ಮಾರ್ಗ ಮಾಡಿರಬೇಕು. ಒಟ್ಟಾರೆಯಾಗಿ ಉಪ್ಪು ಹುಳಿ ಇಲ್ಲದ ಬಜೆಟ್" ಎಂದು ಟೀಕಿಸಿದರು.
ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, "ಸಿಎಂ ಮಂಡನೆ ಮಾಡಿರುವ ಬಜೆಟ್ ರೈತ ವಿರೋಧಿ ಬಜೆಟ್ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಅಂಶವಿಲ್ಲ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಈ ಬಜೆಟ್ ಮಾಡಿದ್ದಾರೆ. ಮೊನ್ನೆ ದೆಹಲಿ ಚಲೋ ಮಾಡಿದ್ರು. ಇವತ್ತು ಕೂಡ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ರೈತರಿಗೆ ಅನುಕೂಲ ಆಗದೇ ಇರುವ ಬಜೆಟ್. ಇವರ ಪ್ರಣಾಳಿಕೆಯಲ್ಲಿ ನೇತಾರರ ಅಭಿವೃದ್ಧಿ ಬಗ್ಗೆ ಹೇಳಿದ್ದರು. ಆದರೆ, ಇವತ್ತು ಆ ಮಾತೇ ಇಲ್ಲ. ನುಡಿದಂತೆ ನಡೆಯದ ಸರ್ಕಾರ ಇದು. ರೈತರಿಗೆ ಬಡವರಿಗೆ ಅನ್ಯಾಯ ಆಗಿರೋ ಬಜೆಟ್. ಬರಗಾಲ ಸಂದರ್ಭದಲ್ಲಿ ಯಾವುದೇ ರೀತಿ ಸಹಾಯ ಆಗದೇ ಇರೋ ಬಜೆಟ್. ಒಬ್ಬ ಅನುಭವಿ ಸಿಎಂ ಈ ರೀತಿ ಬಜೆಟ್ ಮಾಡ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದ ಜನರ ಪಾಲಿಗೆ ಬದುಕಿದ್ದು ಈ ಸರ್ಕಾರ ಸತ್ತಂತೆ" ಎಂದರು.
ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾತನಾಡಿ, "ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಇದು ಅಭಿವೃದ್ಧಿಗೆ ವಿರೋಧ ಆಗಿದೆ. ಅಭಿವೃದ್ಧಿಗೆ ಹಣ ನೀಡಿಲ್ಲ. ರೈತರ ಬಡವರ ಹಾಗೂ ಅಭಿವೃದ್ಧಿಯ ವಿರೋಧಿಯಾಗಿದೆ" ಎಂದು ಟೀಕಿಸಿದರು.
Bjp leaders protest against Budget of Cm Siddaramaiah, they said noble prize should be given to him for such a wonderful budget.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm