ಬ್ರೇಕಿಂಗ್ ನ್ಯೂಸ್
18-02-24 09:37 pm HK News Desk ಕರ್ನಾಟಕ
ಹುಬ್ಬಳ್ಳಿ , ಫೆ 18: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದಿಂದ ದೇಶದ ಬಡತನ ನಿರ್ಮೂಲನೆ ಆಗಲ್ಲ. ಬಿಜೆಪಿಯವರು ರಾಜಕೀಯ ಇಚ್ಛಾಶಕ್ತಿಗೋಸ್ಕರ ರಾಮ ಮಂದಿರ ಕಟ್ಟಿರೋದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ ಕೋರ್ಟ್ ಹೇಳಿರುವ ಜಾಗದಲ್ಲಿ ಇವರು ಮಂದಿರ ನಿರ್ಮಿಸಿಲ್ಲ. ಬೇರೆ ಜಾಗದಲ್ಲಿ ಕಟ್ಟಿದ್ದಾರೆ. ಅದು 40 ಪರ್ಸೆಂಟ್ ಕಟ್ಟಿದಾರೆ. ರಾಮ ಮಂದಿರದಿಂದ ನಿಮ್ಮ ಬಡತನ ನಿರ್ಮೂಲನೆ ಆಗಿದೆಯಾ? ಅದನ್ನು ಹೇಳಿ ಯಾಕೆ ವೋಟ್ ಕೇಳತೀರಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಸರ್ವಾಧಿಕಾರಿ ಧೋರಣೆ:
''ದೇಶದಲ್ಲಿ ಹತ್ತು ವರ್ಷದಿಂದ ಸರ್ವಾಧಿಕಾರಿ ಧೋರಣೆ ನಡೀತಿದೆ. ಹತ್ತು ವರ್ಷದಲ್ಲಿ ಏನೇ ಉದ್ಘಾಟನೆ ಮಾಡಿದ್ರು ಮೋದಿ ಒಬ್ಬರೇ. ದೇಶ ಹಳ್ಳ ಹಿಡಿದು ಹೋಗಿದೆ. ಈ ಅವಧಿಯಲ್ಲಿ ಬಡವರಿಗೆ ಅನುಕೂಲ ಅಗಿರುವ ಒಂದು ಕಾರ್ಯಕ್ರಮ ಇಲ್ಲ. ಇವರ ಸಾಧನೆ ಏನು? ಪೆಟ್ರೋಲ್, ಡಿಸೇಲ್ ರೇಟ್ ಕಡಿಮೆ ಆಗಿದೆಯಾ.? ಚುನಾವಣೆ ಬಂದಾಗ ಒಂದು ಅಜೆಂಡಾ ಸೆಟ್ ಮಾಡ್ತಾರೆ. ಅಧಿಕಾರ ಇದೆ ಎಂದು ದುರುಪಯೋಗ ಮಾಡಬಾರದು. ನೀವು ಪ್ರಭಾವಿಯಾಗಿದ್ರೆ ಟಿವಿ ಆಫ್ ಮಾಡಿ ಬನ್ನಿ'' ಎಂದು ಬಿಜೆಪಿ ನಾಯಕರಿಗೆ ಸಚಿವ ಲಾಡ್ ಸವಾಲು ಹಾಕಿದರು.
''ರಾಮ-ರಹೀಮ್, ಪಾಕಿಸ್ತಾನ -ಅಫ್ಘಾನಿಸ್ತಾನ ಹೆಸರು ಮೂಲಕ ಜನರನ್ನು ಹುಚ್ಚರನ್ನಾಗಿ ಮಾಡ್ತಾರೆ. ಕಳೆದ ಚುನಾವಣೆಯಲ್ಲಿ ಪುಲ್ವಾಮಾ ದಾಳಿ ಬಗ್ಗೆ ಮಾತಾಡಿದ್ರು. ಹಾಗಿದ್ರೆ RDX ಹೇಗೆ ಬಂತು. ದೇಶದಲ್ಲಿ ಈ ತರಹ ಚರ್ಚೆಗಳೇ ಆಗುತ್ತಿಲ್ಲ. ಕೇವಲ ರಾಮ ಮಂದಿರ, ನಿತೀಶ್ ಕುಮಾರ್, ಸೋತ ಕಮಲನಾಥ್ ಅವರನ್ನು ಬಿಜೆಪಿಗೆ ಸೆಳೆಯುತ್ತಿದ್ದಿರಿ. ಇದಕ್ಕೆಲ್ಲ ಅಂತ್ಯ ಇದೆ, ದೇವರಿದ್ದಾನೆ'' ಎಂದರು
10 ವರ್ಷದಲ್ಲಿ ಬಿಜೆಪಿಯವರ ಸಾಧನೆ ಏನು: ''ಈ ದೇಶ ಎಲ್ಲರಿಗೂ ಸೇರಿದ್ದು. ಬಿಜೆಪಿಯವರು ದೇಶಕ್ಕೆ ಏನೋ ಮಾಡಿದ್ದೇವೆ ಎಂದು ಬಿಂಬಿಸಿಕೊಳ್ತೀದ್ದಾರೆ. ಈ ದೇಶ ಸಾಲದಲ್ಲಿ ಮುಳುಗಿ ಹೋಗಿದೆ. ಮೋದಿ ಸಾಹೇಬರು ಮುಖ್ಯಮಂತ್ರಿ ಇದ್ದಾಗ ಮಾತಾಡಿರೋ ವಿಡಿಯೋ ಇದೆ. ಅದನ್ನು ಬಿಜೆಪಿಯವರು ಕೇಳಬೇಕು. ನಾವು ತೆರಿಗೆ ಕೇಳಿದ್ರೆ ಸುಳ್ಳು ರಾಮಯ್ಯ ಅಂತಿದ್ದಾರೆ. ಹಾಗಾದ್ರೆ ಬಿಜೆಪಿಯವರು ಏನು ಮಾಡಿದ್ದಾರೆ'' ಎಂದು ಪ್ರಶ್ನಿಸಿದರು
Karnataka Minister Santosh lad slams Pm Modi over his dictatorship rule in India. Is there any benefit for the poor people. Ayodhya temple is not built in a place where it should have been built he added.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm