ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am