ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm