ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm