ಬ್ರೇಕಿಂಗ್ ನ್ಯೂಸ್
19-02-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಕುವೆಂಪು ರಚಿತ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡು ಸಚಿವರು ಪ್ರಕಟಣೆ ನೀಡಿದ್ದಾರೆ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No order has been issued to change the motto of residential schools, only the proposal Social Welfare Minister Mahadevappa clarifies.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm