ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm