ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm