ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm