ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm