ಬ್ರೇಕಿಂಗ್ ನ್ಯೂಸ್
20-02-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.
ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.
ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.
ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
MLA Vedavyas Kamath is mad, put him out, congress leaders assembly video goes viral. Congress leaders call him fool openly in the assembly
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm