ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm