ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am