ಬ್ರೇಕಿಂಗ್ ನ್ಯೂಸ್
22-02-24 05:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 22: ಬಿಜೆಪಿಯವರು ತಂದಿರುವ ಕಾಯ್ದೆಗಳಿಗೆ ನಾವು ತಿದ್ದುಪಡಿ ತಂದಿದ್ದೇವೆ ಅಷ್ಟೇ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾನೂನಿನ ಅರಿವಿಲ್ಲ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.
2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ವಿಧಾನಸಭೆಯಲ್ಲಿ ನಿನ್ನೆ ಒಂದು ಬಿಲ್ ತಂದಿದ್ದೇವೆ. ಕೆಲವು ಧಾರ್ಮಿಕ ಪರಿಷತ್ಗೆ ತಿದ್ದುಪಡಿ ತಂದಿದ್ದೇವೆ. ವಿಶ್ವ ಕರ್ಮ ಸಮುದಾಯಕ್ಕೆ ಎ, ಬಿ, ಸಿ ಗ್ರೇಡ್ ದೇವಸ್ಥಾನಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮೊದಲನೆಯದಾಗಿ ಇದು ಪ್ರಮುಖ ತಿದ್ದುಪಡಿಯಾಗಿದೆ. ಇದನ್ನ ಬಿಟ್ರೆ ಯಾವುದೇ ಬದಲಾವಣೆ ಮಾಡಿಲ್ಲ. ಅವೆಲ್ಲವೂ 2003ರ ಕಾಯ್ದೆಯಲ್ಲಿ ಏನು ಇದೆಯೋ ಹಾಗೆ ಇದೆ ಎಂದು ಸ್ಪಷ್ಟಪಡಿಸಿದರು.
ಚೌಡೇಶ್ವರಿ ಹಾಗೂ ಬಾಬು ಬುಡನ್ ಗಿರಿಯಲ್ಲಿ ಎರಡು ಧರ್ಮದವರಿಗೂ ಅವಕಾಶ ಇದೆ. ಈ ವ್ಯವಸ್ಥೆ ಹಿಂದಿನಿಂದಲೂ ಇದೆ. 2011ರಲ್ಲೇ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೇ, ಹೆಚ್ಚಿನ ಆದಾಯ ಬಂದ ದೇವಸ್ಥಾನಗಳಲ್ಲಿ ಹಣ ತೆಗೆದುಕೊಳ್ಳಲಾಗುತ್ತಿತ್ತು. ಇದನ್ನ ಅವರೇ ಮಾಡಿರೋದು. 10 ಲಕ್ಷದ ಒಳಗಡೆ ಆದಾಯ ಇರುವ ದೇವಸ್ಥಾನಗಳು ಯಾವುದೇ ರೀತಿಯ ಹಣ ಕೊಡುವಂತಿಲ್ಲ. 10 ಲಕ್ಷದಿಂದ 1 ಕೋಟಿ ಆದಾಯ ಇರುವ ದೇವಸ್ಥಾನಗಳು 5% ಹಣ ಕೊಡಬೇಕು. 1 ಕೋಟಿ ಮೇಲೆ ಆದಾಯವಿರುವ ದೇವಸ್ಥಾನಗಳು 10% ಕೊಡಬೇಕು. ಈ ರೀತಿ ಅಪಾರ್ಥ ಯಾವುದಕ್ಕಾಗಿ ಮಾಡ್ತಿದ್ದಾರೊ ಗೊತ್ತಿಲ್ಲ ಎಂದರು.
ಹಿಂದೂ ದೇವಸ್ಥಾನದ ಹಣ ಅನ್ಯ ಧರ್ಮೀಯರಿಗೆ ಕೊಡಲಾಗ್ತಿದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಹಿಂದೂ ದೇವಸ್ಥಾನಗಳ ಹಣ ಬೇರೆ ಯಾವುದಕ್ಕೂ ಬಳಕೆಯಾಗುವುದಿಲ್ಲ. ಈ ಹಣ ಮುಜರಾಯಿ ಇಲಾಖೆಗೂ ಬರುವುದಿಲ್ಲ. ಧಾರ್ಮಿಕ ಪರಿಷತ್ನ ಅಕೌಂಟ್ನಲ್ಲೇ ಇರುತ್ತೆ. ವಿಧಾನಸಭೆಯಲ್ಲಿ ಈ ತಿದ್ದುಪಡಿಯನ್ನ ಎಲ್ಲರೂ ಸೇರಿ ಪಾಸ್ ಮಾಡಲಾಗಿದೆ. ಬರೋ 30 ಕೋಟಿ ಹಣದಲ್ಲಿ ಸಿ ವರ್ಗದ ದೇವಸ್ಥಾನಕ್ಕೆ ಕೊಡುತ್ತೇವೆ. ಪರ್ಸೆಂಟೇಜ್ ವ್ಯವಹಾರವೆಲ್ಲ ಬಿಜೆಪಿಯವರದ್ದು. ವಿವಾದ ಮಾಡೋದೆ ಬಿಜೆಪಿಯವರ ಹುಟ್ಟುಗುಣ. ಕಾನೂನಿನ ಅರಿವಿಲ್ಲ, ವಿಜಯೇಂದ್ರ ಅವರು ಬಿಜೆಪಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಇಮ್ಮೆಚ್ಯುರುಡ್ ಅಂತಾ ಹೇಳಬೇಕಾಗುತ್ತೆ. ಅವರು ಒಂದು ಸಾರಿ ಧಾರ್ಮಿಕ ಪರಿಷತ್ನ ಪುಸ್ತಕವನ್ನ ಓದಲಿ. ಓದಿದ ನಂತರ ಮಾತಾಡಿದ್ರೆ ಅವರಿಗೆ ಒಂದು ಗೌರವ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಮಾಡಿರೋದನ್ನ ವಿಜಯೇಂದ್ರ ಅವರಿಗೆ ಕಳಿಸುತ್ತೇನೆ ಎಂದರು.
We have only amended the laws brought by the BJP. Muzrai Minister Ramalinga Reddy said the BJP state president was not aware of the law. On the Karnataka Hindu Religious Institutions and Charitable Endowments (Amendment) Bill, 2024, Hegde said, "We have brought a bill in the Assembly yesterday. We have amended some religious councils. A, B and C grade temples have been allowed for the Vishwakarma community.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am