Horrific accident in belagavi, Six Killed: ಬೆಳಗಾವಿಯಲ್ಲಿ ಅಟ್ಟಹಾಸ ಮೆರೆದ ಜವರಾಯ ; ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ಒಂದೇ ಕುಟುಂಬದ ಆರು ಮಂದಿ ಸಾವು 

22-02-24 06:29 pm       HK News Desk   ಕರ್ನಾಟಕ

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮದುವೆ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ಮರಳುತ್ತಿದ್ದಾಗ  ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. 

ಬೆಳಗಾವಿ, ಫೆ.22: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮದುವೆ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ಮರಳುತ್ತಿದ್ದಾಗ  ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. 

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ದುರ್ಘಟನೆ ನಡೆದಿದ್ದು, ಒಂದೇ ಕುಟುಂಬದ ಐವರು ಸೇರಿ ಆರು ಜನ ಮೃತಪಟ್ಟಿದ್ದಾರೆ.  ಮೃತರೆಲ್ಲರೂ ಧಾರವಾಡ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಧಾರವಾಡದಿಂದ ಕಿತ್ತೂರು ಮಾರ್ಗವಾಗಿ  ಖಾನಾಪುರ ತಾಲೂಕಿನ ಗೋಳಿಹಳ್ಳಿ ಗ್ರಾಮಕ್ಕೆ ಕುಟುಂಬದವರೆಲ್ಲ ಮದುವೆಗೆ ಹೊರಟಿದ್ದರು. ಒಂದೇ ಕಾರಿನಲ್ಲಿ 10 ಜನರ ಪ್ರಯಾಣ ಮಾಡುತ್ತಿದ್ದರು. ಆರು ಜನ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಕಾರು ಚಾಲಕ ಶಾರುಖ್ ಪೆಂಡಾರಿ (30), ಇಕ್ಬಾಲ್ ಜಮಾದಾರ್ (50), ಸಾನಿಯಾ ಲಂಗೋಟಿ(37) ಉಮರಾ ಬೇಗಂ ಲಂಗೋಟಿ (17) ಶಬುನಂ ಲಂಗೋಟಿ (37), ಫರಾನ್ ಲಂಗೋಂಟಿ (13) ಮೃತ ದುದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ  ಫರಾತ್ ಬೆಟಗೇರಿ (18) ಸೂಫಿಯಾ ಲಂಗೋಟಿ (22) ಸಾನಿಯಾ ಜಾಮದಾರ್ 36) ಮಾಹೀಂ ಲಂಗೋಟಿ (7) ಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Horrific accident in belagavi 6 members of a faThe disease attended a wedding in belagavimily killed on spot. The diseased we returning back to home after attending a wedding function in belagavi after which the car lost control and Rammed the tree in the roadside.