ಬ್ರೇಕಿಂಗ್ ನ್ಯೂಸ್
22-02-24 10:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಬೆಂಗಳೂರಿನಿಂದ ಏರ್ ಇಂಡಿಯಾ ವಿಮಾನದಲ್ಲಿ ಲಕ್ನೋಗೆ ಹೊರಟಿದ್ದ ಯುವಕನೊಬ್ಬ ತನ್ನನ್ನು ಭಯೋತ್ಪಾದಕ ಎಂದು ಹೇಳಿಕೊಂಡು ವಿಮಾನ ಸಿಬಂದಿ ಮತ್ತು ಪ್ರಯಾಣಿಕರನ್ನು ಒಮ್ಮೆಗೆ ಭೀತಿಗೊಳಪಡಿಸಿದ ಪ್ರಸಂಗ ನಡೆದಿದೆ.
ಉತ್ತರ ಪ್ರದೇಶ ಮೂಲದ ಆದರ್ಶ್ ಕುಮಾರ್ ಸಿಂಗ್ ಈ ರೀತಿ ವರ್ತಿಸಿದ ಯುವಕನಾಗಿದ್ದು ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ. ಆದರ್ಶ್ ಸಿಂಗ್ ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ಫೆ.17ರಂದು ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟಿದ್ದ. ವಿಮಾನ ಟೇಕಾಫ್ ಆದ ಕೆಲ ಹೊತ್ತಿನಲ್ಲೇ ತನ್ನನ್ನು ಭಯೋತ್ಪಾದಕ ಗುಂಪಿನ ಸದಸ್ಯ ಎಂದು ಹೇಳಿಕೊಂಡಿದ್ದಾನೆ. ಬಳಿಕ ವಿಮಾನವನ್ನು ನಿಲ್ಲಿಸಿ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆತನ ಬ್ಯಾಗ್ ಪರಿಶೀಲನೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಇರಲಿಲ್ಲ.
ಪೊಲೀಸರು ವಿಚಾರಣೆ ನಡೆಸಿದಾಗ ಯುವಕ ಸ್ವಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥತೆ ಹೊಂದಿದ್ದಾನೆ ಅನ್ನೋದನ್ನು ಪತ್ತೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಯುವಕ ಸ್ಥಿಮಿತ ಕಳಕೊಂಡ ರೀತಿ ವರ್ತಿಸುತ್ತಿದ್ದಾನೆ. ಪೊಲೀಸರು ಯುವಕನನ್ನು ವಿಚಾರಣೆ ನಡೆಸಿ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆತನಿಗೆ ಗರ್ಲ್ ಫ್ರೆಂಡ್ ಜೊತೆಗೆ ಹೊಯ್ದಾಟ ಇರುವ ಬಗ್ಗೆಯೂ ಸಂಬಂಧಿಕರು ತಿಳಿಸಿದ್ದಾರೆ. ಹಾಗಾಗಿ ವಿಚಿತ್ರವಾಗಿ ವರ್ತಿಸುತ್ತಿದ್ದಾನೆ ಎಂದಿದ್ದಾರೆ. ಮಾನಸಿಕ ಸಮಸ್ಯೆ ಇರುವ ಬಗ್ಗೆ ವೈದ್ಯರ ಸರ್ಟಿಫಿಕೇಟ್ ತರುವಂತೆ ಪೊಲೀಸರು ತಿಳಿಸಿದ್ದಾರೆ. ಏರ್ ಇಂಡಿಯಾ ಸಿಬಂದಿ ನೀಡಿದ ದೂರಿನಂತೆ ಏರ್ಪೋರ್ಟ್ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
A young man, son of an Uttar Pradesh police officer, created panic inside an Air India flight to Lucknow, minutes before its departure from Bengaluru’s Kempegowda International Airport after he claimed to be a terrorist, officials said. The police later arrested the accused identified as Adarsh Kumar Singh, son of an assistant police sub-inspector.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm