ಬ್ರೇಕಿಂಗ್ ನ್ಯೂಸ್
22-02-24 10:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಬೆಂಗಳೂರಿನಿಂದ ಏರ್ ಇಂಡಿಯಾ ವಿಮಾನದಲ್ಲಿ ಲಕ್ನೋಗೆ ಹೊರಟಿದ್ದ ಯುವಕನೊಬ್ಬ ತನ್ನನ್ನು ಭಯೋತ್ಪಾದಕ ಎಂದು ಹೇಳಿಕೊಂಡು ವಿಮಾನ ಸಿಬಂದಿ ಮತ್ತು ಪ್ರಯಾಣಿಕರನ್ನು ಒಮ್ಮೆಗೆ ಭೀತಿಗೊಳಪಡಿಸಿದ ಪ್ರಸಂಗ ನಡೆದಿದೆ.
ಉತ್ತರ ಪ್ರದೇಶ ಮೂಲದ ಆದರ್ಶ್ ಕುಮಾರ್ ಸಿಂಗ್ ಈ ರೀತಿ ವರ್ತಿಸಿದ ಯುವಕನಾಗಿದ್ದು ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ. ಆದರ್ಶ್ ಸಿಂಗ್ ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ಫೆ.17ರಂದು ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟಿದ್ದ. ವಿಮಾನ ಟೇಕಾಫ್ ಆದ ಕೆಲ ಹೊತ್ತಿನಲ್ಲೇ ತನ್ನನ್ನು ಭಯೋತ್ಪಾದಕ ಗುಂಪಿನ ಸದಸ್ಯ ಎಂದು ಹೇಳಿಕೊಂಡಿದ್ದಾನೆ. ಬಳಿಕ ವಿಮಾನವನ್ನು ನಿಲ್ಲಿಸಿ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆತನ ಬ್ಯಾಗ್ ಪರಿಶೀಲನೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಇರಲಿಲ್ಲ.
ಪೊಲೀಸರು ವಿಚಾರಣೆ ನಡೆಸಿದಾಗ ಯುವಕ ಸ್ವಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥತೆ ಹೊಂದಿದ್ದಾನೆ ಅನ್ನೋದನ್ನು ಪತ್ತೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಯುವಕ ಸ್ಥಿಮಿತ ಕಳಕೊಂಡ ರೀತಿ ವರ್ತಿಸುತ್ತಿದ್ದಾನೆ. ಪೊಲೀಸರು ಯುವಕನನ್ನು ವಿಚಾರಣೆ ನಡೆಸಿ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆತನಿಗೆ ಗರ್ಲ್ ಫ್ರೆಂಡ್ ಜೊತೆಗೆ ಹೊಯ್ದಾಟ ಇರುವ ಬಗ್ಗೆಯೂ ಸಂಬಂಧಿಕರು ತಿಳಿಸಿದ್ದಾರೆ. ಹಾಗಾಗಿ ವಿಚಿತ್ರವಾಗಿ ವರ್ತಿಸುತ್ತಿದ್ದಾನೆ ಎಂದಿದ್ದಾರೆ. ಮಾನಸಿಕ ಸಮಸ್ಯೆ ಇರುವ ಬಗ್ಗೆ ವೈದ್ಯರ ಸರ್ಟಿಫಿಕೇಟ್ ತರುವಂತೆ ಪೊಲೀಸರು ತಿಳಿಸಿದ್ದಾರೆ. ಏರ್ ಇಂಡಿಯಾ ಸಿಬಂದಿ ನೀಡಿದ ದೂರಿನಂತೆ ಏರ್ಪೋರ್ಟ್ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
A young man, son of an Uttar Pradesh police officer, created panic inside an Air India flight to Lucknow, minutes before its departure from Bengaluru’s Kempegowda International Airport after he claimed to be a terrorist, officials said. The police later arrested the accused identified as Adarsh Kumar Singh, son of an assistant police sub-inspector.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am