ಬ್ರೇಕಿಂಗ್ ನ್ಯೂಸ್
23-02-24 11:05 am Bangalore Correspondent ಕರ್ನಾಟಕ
ಬೆಂಗಳೂರು, ಫೆ 23: ಆಡಳಿತ ಪಕ್ಷದವರು ಸದನದ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಕ್ರಮಕ್ಕೆ ಸಭಾಧ್ಯಕ್ಷರು ಕೂಡ ಬೆಂಬಲ ನೀಡಿರುವುದು ದುರದೃಷ್ಟ ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಎದುರು ನೋಡುತ್ತಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಅಭಿವೃದ್ಧಿಯನ್ನೇ ಮಾಡದ ನಾಲಾಯಕ್ ಸರಕಾರ ಎಂದು ಅವರು ಹೇಳಿದರು.
ನಾಲಾಯಕ್ ಕಾಂಗ್ರೆಸ್ ಸರಕಾರಕ್ಕೆ ಗ್ಯಾರಂಟಿಗಳಿಂದ ತಮ್ಮ ಗೆಲುವು ಸಾಧ್ಯವಿಲ್ಲ ಎಂಬ ಅರಿವಾಗಿದೆ. ಅದಕ್ಕಾಗಿಯೇ ಪದೇಪದೇ ನಿರ್ಣಯ ಮಂಡಿಸಿ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತೀವ್ರವಾಗಿ ಖಂಡಿಸಿದರು.
ಸದನದ ಗೌರವವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್ ನಾಶ ಮಾಡುತ್ತಿದೆ. ಬಿಜೆಪಿ ಈ ವಿಷಯವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಹಾಗಾಗಿ ನಾವು ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ್ದೇವೆ. ಕಾನೂನು ಸಚಿವರ ನಡೆಯನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದವರಾದ ನಾವು ಸದನದ ನೀತಿ ನಿಯಮಗಳಿಗೆ ಗೌರವ ಕೊಟ್ಟು ಸದನ ಸುಸೂತ್ರವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಮತ್ತು ಸಭಾಧ್ಯಕ್ಷರಿಗೆ ಸಹಕಾರ ನೀಡಿದ್ದೇವೆ ಎಂದು ಅವರು ವಿವರಿಸಿದರು. ಆದರೆ, ಇವತ್ತು ಮಾನ್ಯ ಕಾನೂನು ಸಚಿವರು ಏಕಾಏಕಿಯಾಗಿ ಹೆಚ್ಚುವರಿ ವಿಷಯದಡಿ ನಿರ್ಣಯ ಮಂಡಿಸಿದ್ದಾರೆ ಎಂದು ಅವರು ಟೀಕಿಸಿದರು.
ಆಡಳಿತ ಪಕ್ಷವು ವಿಪಕ್ಷದ ತಾಳ್ಮೆ ಪರೀಕ್ಷಿಸುವ ಕೆಲಸ ಮಾಡಿದೆ. ಕೇಂದ್ರ ಸರಕಾರ ಮತ್ತು ನರೇಂದ್ರ ಮೋದಿಜೀ ಅವರು ಏನು ಸಾಧನೆ ಮಾಡಿದ್ದಾರೆ ಎಂಬುದು ಇಡೀ ದೇಶಕ್ಕೇ ಗೊತ್ತಿದೆ. ಜನತೆಗೂ ಗೊತ್ತಿದೆ. ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಗಾಬರಿಯಿಂದ ಆಡಳಿತ ಪಕ್ಷವಾದ ಕಾಂಗ್ರೆಸ್ನವರು ಈ ರೀತಿ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಇದ್ದರು.
MLA B.Y. Vijayendra has alleged that the ruling party has flouted all rules and regulations of the House. Speaking to media persons at Vidhana Soudha here today, he said it was unfortunate that the Speaker had also supported the government's move. He said the Congress government, which is looking forward to defeat in the Lok Sabha elections, is a nalayak government that has not done any development in the state.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm