ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm