ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm