ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm