ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm