ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.

ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm