ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.

ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm