ಬ್ರೇಕಿಂಗ್ ನ್ಯೂಸ್
27-02-24 01:29 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷದ ಹೈಕಮಾಂಡಿಗೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ.
ಬಿಜೆಪಿ ಶಾಸಕ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಪರ ಮತ ಚಲಾಯಿಸಿದ್ದಾರೆ. ಹೀಗಾಗಿ ಎಸ್ಟಿಎಸ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ.
ಮತ ಚಲಾಯಿಸುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಎಸ್.ಟಿ. ಸೋಮಶೇಖರ್ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು.
ಅಭಿವೃದ್ಧಿಗೆ ಅನುದಾನ ಕೊಡುವ ಅಭ್ಯರ್ಥಿಗೆ ನನ್ನ ಮತ ಎಂದಿದ್ದರು. ಮತದಾನದ ಬಳಿಕ ಯಾರು ಅಸಮಧಾನ ಆದ್ರೆ ನನಗೇನು, ನಾನು ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕ್ತೀನಿ. ವೋಟ್ ಆದ ಮೇಲೆ ಯಾರಿಗೆ ಅಂತ ನಿಮಗೇ ಗೊತ್ತಾಗುತ್ತೆ. ಕಾಂಗ್ರೆಸ್ ಜೊತೆಗಿನ ಸಂಬಂಧ ಈಗ ಹೊಸದಾಗಿ ಅಲ್ಲ, ಒಂದು ವರ್ಷದಿಂದ ಇದೆ. ವಿಪ್ ಉಲ್ಲಂಘನೆ, ಉಚ್ಚಾಟನೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು.
ಬಿಜೆಪಿ ನಾಯಕರಿಂದ ಎಸ್ಟಿ ಸೋಮಶೇಖರ್ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗೆ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲೂ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತದಾನ ಮಾಡಿ ಬಿಜೆಪಿಗೆ ಮುಜುಗರ ತಂದಿದ್ದರು. ಎಸ್ಟಿಎಸ್ ಅಡ್ಡ ಮತದಾನ ಮಾಡಿರುವ ಪರಿಣಾಮ ಬಿಜೆಪಿ ಮುಂದೇನು ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
In a surprising turn of events, MLA ST Somashekar from Karnataka's Bharatiya Janata Party (BJP) cross-voted during the ongoing Rajya Sabha elections on Tuesday, February 27. ST Somashekar, who secured victory in Yeshwanthapura with a significant margin of over 10,000 votes in the previous assembly elections, shocked his party by casting his vote in favor of the Congress.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm