ಬ್ರೇಕಿಂಗ್ ನ್ಯೂಸ್
27-02-24 03:50 pm HK News Desk ಕರ್ನಾಟಕ
ತುಮಕೂರು, ಫೆ.27: ಒಂದೇ ದಿನ ಶಸ್ತ್ರಚಿಕಿತ್ಸೆಗೆ ಒಳಗಾದವರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸೇರಿಯನ್ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಐದು ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಮೂವರಿಗೂ ಕಳೆದ 22ರಂದು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಘಟನೆ ಸಂಬಂಧ ಶಸ್ತ್ರಚಿಕಿತ್ಸೆ ನಡೆಸಿದ ಡಾ.ಪೂಜಾ ಸೇರಿದಂತೆ ಮೂವರು ಸಿಬಂದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಸೇವೆಯಿಂದ ಅಮಾನತು ಮಾಡಿದ್ದಾರೆ.


ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ ಶಸ್ತ್ರ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ 20 ವರ್ಷದ ಅಂಜಲಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24 ರಂದು ಸಾವನ್ನಪ್ಪಿದ್ದಾರೆ.


ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಅವರಿಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು. ನರಸಮ್ಮರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಫೆಬ್ರವರಿ 25ರಂದು ನರಸಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಂಜಲಿ ಕುಟುಂಬಸ್ಥರು ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ವೈದ್ಯರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ವೈದ್ಯೆ ಸೇರಿದಂತೆ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, ಓಟಿ ಟೆಕ್ನಿಷಿಯನ್ ಕಿರಣ್, ಸ್ಟಾಫ್ ನರ್ಸ್ ಪದ್ಮಾವತಿ ಎಂಬವರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.
Two women have died due to alleged medical negligence during caesarean section surgery, and one died following complications developed after hysterectomy at the government hospital in Pavagada of Tumakuru district.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am