ಬ್ರೇಕಿಂಗ್ ನ್ಯೂಸ್
27-02-24 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗಲೇ ಕರ್ನಾಟಕ ಬಿಜೆಪಿಗೆ ಇಬ್ಬರು ಶಾಸಕರು ಶಾಕ್ ನೀಡಿದ್ದಾರೆ. ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಬಿಜೆಪಿಗೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಇಬ್ಬರು ಬಿಜೆಪಿ ಶಾಸಕರೂ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಕೈ ಹಿಡಿಯುವ ಸಾಧ್ಯತೆ ಇದೆ.
ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮಂಗಳವಾರವೇ ಬಿಜೆಪಿ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಈ ಇಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ. ಸೋಮಶೇಖರ್ ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತು ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ, ತಮ್ಮಿಂದ ತೆರವಾಗುವ ಶಾಸಕ ಕ್ಷೇತ್ರದಲ್ಲಿ ಪುತ್ರರನ್ನು ನಿಲ್ಲಿಸಿ ಕಾಂಗ್ರೆಸ್ ಪಕ್ಷದಲ್ಲಿ ಗೆಲ್ಲಿಸುವ ತಂತ್ರ ಹೂಡಿದ್ದಾರೆ.
ಇದೇ ವೇಳೆ, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರ ಮೇಲೆ ಪಕ್ಷದಿಂದ ಉಚ್ಛಾಟನೆ ಮತ್ತು ಅನರ್ಹತೆಯ ತೂಗುಗತ್ತಿ ಇದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರವೇ ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಉಚ್ಛಾಟನೆಯ ತೂಗುಗತ್ತಿಯಿಂದ ಪಾರಾಗುವ ಪ್ರಯತ್ನವನ್ನು ಶಾಸಕರು ನಡೆಸಿದ್ದಾರೆ. ಸ್ಪೀಕರ್ಗೆ ಬಿಜೆಪಿ ನಾಯಕರು ದೂರು ನೀಡಿದರೆ, ಅವರದನ್ನು ಪರಿಗಣಿಸಿದರೆ ಶಾಸಕರನ್ನು ಅನರ್ಹಗೊಳಿಸುವ ಅವಕಾಶ ಇದೆ.
ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಎಸ್ಟಿ ಸೋಮಶೇಖರ್ ಅಂತೂ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ ಜೊತೆ ನಿರಂತರವಾಗಿ ಕಾಣಿಸಿಕೊಂಡಿದ್ದರು. ಪಕ್ಷದ ಶಾಸಕಾಂಗ ಸಭೆಗೂ ಗೈರಾಗಿ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿದ್ದರು. ಶಿವರಾಮ್ ಹೆಬ್ಬಾರ್ ಅವರು ಸದನದಲ್ಲಿಯೇ ಕಾಂಗ್ರೆಸ್ ಅನ್ನು ವಹಿಸಿಕೊಂಡು ಮಾತಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಆಮೂಲಕ ಇವರಿಬ್ಬರು ಅಧಿಕೃತವಾಗಿ ಘರ್ ವಾಪ್ಸಿಯಾಗಲು ತಯಾರಿ ನಡೆಸಿದ್ದಾರೆ.
Karnataka BJP MLA ST Somashekar and Shivaram Hebbar resign BJP, rejoin congress party. One of the leaders who, it is learnt, cross-voted is former minister S T Somashekar. There was also an apprehension in the party ranks of former minister Shivaram Hebbar voting against the coalition’s candidate. The BJP pasted a copy of the party whip, directing Hebbar to vote for the coalition candidates, outside his room at the Vidhana Soudha. In the Rajya Sabha polls, MLAs retain their freedom to vote for a candidate of their choice.
22-06-25 12:36 pm
HK News Desk
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
22-06-25 04:57 pm
HK News Desk
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
Couple Caught at Jaipur Hotel, Video: ಹೋಟೆಲ್...
20-06-25 10:19 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm